June 5, 2026
IMG-20260605-WA0027(1)
ಕೊಪ್ಪಳ, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಲ್ದೋಟ ಸಮೂಹದ ಎಂಎಸ್‌ಪಿಎಲ್ ಕಂಪನಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
  ನಂತರ ಎಂಎಸ್‌ಪಿಎಲ್ ಪೆಲ್ಲೆಟ್ ಪ್ಲಾಂಟ್ ಮುಖ್ಯಸ್ಥ ವೀರೇಶ್ ಕೊಪ್ಪಳ ಮಾತನಾಡಿ “ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕೈಯಲ್ಲಿದೆ. ಬಲ್ದೋಟ ಸಮೂಹವು ಪ್ರತಿವರ್ಷ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಹಾಗೂ ಅವುಗಳ ಪಾಲನೆ-ಪೋಷಣೆ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ಕಳೆದ 20 ವರ್ಷಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದ್ದು, ಈ ವರ್ಷ ಹೊಸಪೇಟೆ, ಸಂಡೂರು, ಕೊಪ್ಪಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ 5 ಸಾವಿರ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.
    .           ವಾಣಿಜ್ಯ ತೆರಿಗೆ ನಿರೀಕ್ಷಕ ಹುಸೇನ್ ಸಾಬ್, ಮಾತನಾಡಿ“ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಸಸಿ ನೆಡುವುದಷ್ಟೇ ಅಲ್ಲ, ಅವುಗಳ ಸಂರಕ್ಷಣೆ ಮತ್ತು ಪಾಲನೆಗೂ ಹೆಚ್ಚಿನ ಮಹತ್ವ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಬಲ್ದೋಟ ಸಮೂಹ ಕೈಗೊಂಡಿರುವ ಈ ಮಹತ್ವದ ಕಾರ್ಯಕ್ಕೆ ಸಾರ್ವಜನಿಕರು ಸಹ ಬೆಂಬಲ ನೀಡಬೇಕು” ಎಂದು ಕರೆ ನೀಡಿದರು.
 ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಸುರೇಶ್ ಖಾನಾಪುರಿ, ವಾಣಿಜ್ಯ ತೆರಿಗೆ ಅಧಿಕಾರಿ ಪಿ. ರಮೇಶ್, ವಾಣಿಜ್ಯ ತೆರಿಗೆ ನಿರೀಕ್ಷಕರಾದ ಪ್ರಕಾಶ್ ಮಾದಿನೂರು, ಉಪ ಪ್ರಧಾನ ವ್ಯವಸ್ಥಾಪಕ (ಎಚ್‌ಆರ್) ವಿಠ್ಠಲ್ ಸಲಗಾರೆ, ಸಹಾಯಕ ಪ್ರಧಾನ ವ್ಯವಸ್ಥಾಪಕ (ಸಿಎಸ್‌ಆರ್) ರವಿ ಬಿಸಗುಪ್ಪಿ, ಸಿಸಿ ವಿಭಾಗದ ಪ್ರವೀಣ್ ಕುಮಾರ್, ಮನು, ಸೆಕ್ಯೂರಿಟಿ ಮ್ಯಾನೇಜರ್ ಮಹೇಶ್ ಸೇರಿದಂತೆ ವಾಣಿಜ್ಯ ತೆರಿಗೆ ಇಲಾಖೆಯ ಸಿಬ್ಬಂದಿ, ವಾಸವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬಲ್ದೋಟ ಸಂಸ್ಥೆಯ ಸಿಎಸ್‌ಆರ್ ವಿಭಾಗದ ಬಸವಪ್ರಭು ಪಾಟೀಲ್ ಮತ್ತು ಪ್ರಶಾಂತ್ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಶ್ರೀನಿವಾಸ್ ನೆರವೇರಿಸಿದರು.

Leave a Reply

Your email address will not be published. Required fields are marked *