
ಕೊಪ್ಪಳ: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. ಕೊಪ್ಪಳ 2024 25 ರಿಂದ 2029-30ನೇ ಸಾಲಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸಾಮಾನ್ಯ ಚುನಾವಣೆಯಲ್ಲಿ 12 ಸ್ಥಾನದಲ್ಲಿ ಏಳು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ.
ಹುಲಗಿ ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರದಿಂದ ಶ್ರೀಮತಿ ಲಕ್ಷ್ಮೀದೇವಿ ನಿಂಗಜ್ಜ ಶಹಪುರ, ಇರಕಲ್ಲಗಡಾ ಸಾಮಾನ್ಯ ಕ್ಷೇತ್ರದಿಂದ ಸಂಗನಗೌಡ ಬಿ.ಟಿ.ಪಾಟೀಲ್, ಕೊಪ್ಪಳ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರದಿಂದ ರಾಮಣ್ಣ ಕಲ್ಲನ್ನವರ, ಗೊಂಡಬಾಳ ಹಿಂದುಳಿದ ವರ್ಗ ಅ ಕ್ಷೇತ್ರದಿಂದ ಗವಿಸಿದ್ದಪ್ಪ ಹುಳ್ಳಿ, ಇಂದರಗಿ ಸಾಮಾನ್ಯ ಕ್ಷೇತ್ರದಿಂದ ಕರೆಕಲ್ಲಪ್ಪ ಮಣ್ಣುರ, ಹಿಂದುಳಿದ ವರ್ಗ ಬ ಕ್ಷೇತ್ರದಿಂದ ರಾಮನಗೌಡ ಡಂಬ್ರಳ್ಳಿ, ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ (ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ) ವೀರೇಶ ಬಳಿಗಾರ ಸಾ. ಕಿನ್ನಾಳ ಒಟ್ಟು ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವಿರೋಧವಾಗಿ ಆಯ್ಕೆಯಾಗಲು ಕಾರಣಿಕರ್ತರಾದ ಮಾಜಿ ಶಾಸಕರು ಹಾಗೂ ಹಿರಿಯರಾದ ಕೆ.ಬಸವರಾಜ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಕೆ.ರಾಜಶೇಖರ್ ಹಿಟ್ನಾಳ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರನ್ನು ಅವಿರೋಧವಾಗಿ ಆಯ್ಕೆಗೊಂಡ ಏಳು ಜನ ನಿರ್ದೇಶಕರು ಅಭಿನಂದಿಸಿದ್ದಾರೆ.