
ಕೊಪ್ಪಳ : ನಗರದ ಬಳಿ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಶಾಂತಕುಮಾರ್ ದೊಡ್ಡಮನಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ಮಾಡುತ್ತಿರುವುದಕ್ಕೆ ಇದಕ್ಕೆ ಸರ್ಕಾರ ಅನುಮತಿ ನೀಡಿರುವುದು ದುರದೃಷ್ಟಕರ ಸಂಗತಿ, ಈಗ ಬಹಳಷ್ಟು ಕಾರ್ಖಾನೆಗಳು ಸ್ಥಾಪನೆಯಾಗಿದ್ದು ಅದರಿಂದ ಗ್ರಾಮೀಣ ಪ್ರದೇಶಗಳು ಬಹಳ ದುಷ್ಪರಿಣಾಮಗಳನ್ನು ಎದುರಿಸುತ್ತಿವೆ ಈ ಕಾರ್ಖಾನೆಗಳಿಂದ ಗ್ರಾಮೀಣ ಭಾಗದ ಜನರ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತಿದ್ದು ರೈತರು ಬೆಳೆಗಳ ಹಾನಿ ತೊಂದರೆ ಅನುಭವಿಸುತ್ತಿದ್ದಾರೆ, ಈ ಕಾರ್ಖಾನೆಯಿಂದ ಜನರ ಆರೋಗ್ಯ ಹದಗೆಡುತ್ತಿದ್ದು ದಮ್ಮು ಕೆಮ್ಮು ಸೇರಿದಂತೆ ಇತರ ರೋಗಗಳು ಆರೋಗ್ಯದ ಮೇಲೆ ವಯೋ ವೃದ್ಧರು ಕೂಡ ಉಸಿರಾಟದ ತೊಂದರೆ ಸೇರಿದಂತೆ ವಿವಿದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಹೀಗಾಗಿ ಬೃಹತ್ ಕಾರ್ಖಾನೆ ವಿಸ್ತರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಜೆಡಿಎಸ್ ಪಕ್ಷದ ವಿವೇಕಾನಂದ್ ಕಟ್ಟಿಮನಿ, ಶ್ರೀನಿವಾಸ್ ಬಾವಿಮನಿ, ವೀರೇಶ್ ಆರ್ ಟಿ ತಿಳಿಸಿದ್ದಾರೆ.