June 5, 2025
IMG-20250219-WA0043
ಕೊಪ್ಪಳ : ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳನ್ನು  ಅತೀ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ‌ ಎಂದು ಕೊಪ್ಪಳ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು.
ಅವರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಇನ್ನುಳಿದ ಯೋಜನೆಗಳಾದ ಸ್ತ್ರೀ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು‌.
    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ರತ್ನಂ ಪಾಂಡೆ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ ಖಾದ್ರಿ, ಮಂಜುನಾಥ ಗೊಂಡಬಾಳ ಮತ್ತು ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *