
ಕೊಪ್ಪಳ: ಭಾಗ್ಯನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಸ್ವತ್ತುಗಳಿಗೆ ನಿಗದಿತ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆದುಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಸುರೇಶ್ ಬಬಲಾದಿ ತಿಳಿಸಿದ್ದಾರೆ.
ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರದಂದು ಇ- ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಮೇ 10ರ ಒಳಗೆ ಇ-ಖಾತಾ ನೀಡಲು ಉದ್ದೇಶಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೂ ಸಹ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಅನಧಿಕೃತ ಸ್ವತ್ತುಗಳ ಮಾಲೀಕರು ಸಹ ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ ಇ-ಖಾತಾ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
‘ಎ’ ರಿಜಿಸ್ಟರ್ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕ ನೋಂದಾಯಿತ ಸಾಬೀತುಪಡಿಸುವ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು, ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ ಅಡಿ ನೀಡಲಾದ ಹಕ್ಕು ಪತ್ರ, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ
ಪೋಟೊ ಮತ್ತು ಸ್ವತ್ತಿನ ಜಿಪಿಎಸ್ ವಿವರದ ಪೋಟೊ ಹಾಗೂ ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು ಎಂದು ಹೇಳಿದರು.
ರಿಜಿಸ್ಟರ್ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ -ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ 2024ರ ಸೆ.10ರ ಪೂರ್ವದಲ್ಲಿ ನೋಂದಾಯಿತ
ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ ಇತರೆ ದಾಖಲೆಗಳ ಪ್ರತಿ ಲಗತ್ತಿಸಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಚೇರಿ ಸಂಪರ್ಕಿಸಿ ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದರು. ಸಿಬ್ಬಂದಿಗಳಾದ ಅರುಣ್, ಹೇಮಣ್ಣ, ಇತರರು ಹಾಜರಿದ್ದರು.