June 5, 2025
FB_IMG_1741416899334

ಕೊಪ್ಪಳ: 2025-26ನೇ ಸಾಲಿನ ಆಯವ್ಯಯದಲ್ಲಿ ಕೊಪ್ಪಳ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಂಪರ್ ಬಜೆಟ್ ನೀಡಿದ್ದಾರೆ ಎಂದು ಶ್ರೀ ಗವಿಸಿದ್ದೇಶ್ವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರು ಹಾಗೂ ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ ತಿಳಿಸಿದ್ದಾರೆ.

 ಈ ಬಾರಿ ಬಜೆಟ್ ನಲ್ಲಿ  ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು, ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದಾಗಿ ನೀರಿನ ಸಂಗ್ರಹಣೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕೊಪ್ಪಳ ಜಿಲ್ಲೆಯಲ್ಲಿ ನವಲಿ ಸಮತೋಲನಾ ಜಲಾಶಯ ನಿರ್ಮಾಣವೂ ಸೇರಿದಂತೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು, ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸಲಾಗುವುದು, ಕಳೆದ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದ ಕಲಬುರಗಿ ಜಿ.ಟಿ.ಟಿ.ಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ 60 ಕೋಟಿ ರೂ. ಹಾಗೂ ಕೊಪ್ಪಳದ ತಳಕಲ್‌ನಲ್ಲಿರುವ ಕೇಂದ್ರಕ್ಕೆ 90 ಕೋಟಿ ರೂ. ಅನ್ನು KKRDB ವತಿಯಿಂದ ಒದಗಿಸಲಾಗಿತ್ತು. ಈ ಎರಡು ಕೇಂದ್ರಗಳಿಗೆ ಉಳಿದ ಅನುದಾನವನ್ನು ಒದಗಿಸುವುದರೊಂದಿಗೆ ಮೈಸೂರಿನ ವರುಣಾದಲ್ಲಿನ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ನಬಾರ್ಡ್ ಸಹಯೋಗದೊಂದಿಗೆ 60 ಕೋಟಿ ರೂ. ಅನುದಾನ ಒದಗಿಸಿ ಪ್ರಸಕ್ತ ವರ್ಷದಲ್ಲಿ ಸದರಿ ಕೇಂದ್ರಗಳನ್ನು ಕಾರ್ಯಾರಂಭ ಮಾಡಲಾಗುವುದು, ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಕ್ರೀಡಾಂಗಣವನ್ನು ಅಭಿವೃದ್ಧಿಗೊಳಿಸಲಾಗುವುದು, ಕೊಪ್ಪಳ ಜಿಲ್ಲೆಯಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ 50 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕುಕನೂರು ಮತ್ತು ಕಾರಟಗಿ ತಾಲ್ಲೂಕಿನಲ್ಲಿ JMFC ನ್ಯಾಯಾಲಯವನ್ನು ತಲಾ ಒಂಭತ್ತು ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಸ್ಥಾಪಿಸಲಾಗುವುದು, ರೋಣ ತಾಲ್ಲೂಕಿನ ಕೋಟುಮಚಗಿ ಗ್ರಾಮದಿಂದ ಕೊಪ್ಪಳ ಜಿಲ್ಲೆಯ ವೀರಾಪುರ ಗ್ರಾಮದವರೆಗೆ ಹಿರೇಹಳ್ಳದಲ್ಲಿ ಹೂಳೆತ್ತುವ ಮೂಲಕ 60 ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ನಿಯಂತ್ರಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಇದು ಕೊಪ್ಪಳ ಜಿಲ್ಲೆಗೆ ನೀಡಿದ ಬಂಪರ್ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *