June 5, 2025
IMG-20241212-WA0052

ಕೊಪ್ಪಳ : ಭಾರತೀಯ ಜನತಾ ಪಾರ್ಟಿಯಿಂದ ವಿವಿಧ  ನಿಗಮಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಓಬಿಸಿ ಅಧ್ಯಕ್ಷ ಕೆ.ಎಸ್ .ಹನುಮಂತ ತಿಳಿಸಿದ್ದಾರೆ.

   ಸಮಾಜ ಕಲ್ಯಾಣ, ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನ ಬಿಡುಗಡೆಯನ್ನು ಬಹುತೇಕ ಸ್ಥಗಿತಗೊಳಿಸಿದ್ದು. ನೆಪ ಮಾತ್ರಕ್ಕೆ ಎನ್ನುವಂತೆ ಬಜೆಟ್‌ನಲ್ಲಿ ಘೋಷಿಸುವ ಮೊತ್ತಕ್ಕೂ ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಇದರಿಂದ ಹಿಂದುಳಿದ ಹಾಗೂ ಅತೀ ಹಿಂದುಳಿದ ಹಾಗೂ ಅಲೆಮಾರಿ ಸಮುದಾಯಗಳು ಹಾಗೂ ಇತರ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳು ಈ ಹಿಂದಿನ ಸರ್ಕಾರದಲ್ಲಿ ಪಡೆಯುತ್ತಿದ್ದ ಸ್ಥ-ಉದ್ಯೋಗ ಯೋಜನೆ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುತ್ತಿದ್ದ ಉಚಿತ ಬೋರ್‌ವೆಲ್ ಯೋಜನ ಬಹುತೇಕ ಸ್ಥಗಿತಗೊಂಡಿದ್ದು, ತಮ್ಮ ಪಂಚಭಾಗ್ಯ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ಕೆ ವಿನಿಯೋಗವಾಗಬೇಕಿದ್ದ ಹಣವೆಲ್ಲವೂ ವರ್ಗಾವಣೆಯಾಗುತ್ತಿದೆ.

     ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಅಹಿಂದ ಮಂತ್ರ ಪಠಿಸುವ ಹಾಗೂ ಹಿಂದುಳಿದ ಸಮುದಾಯಗಳನ್ನು ಬಳಸಿಕೊಳ್ಳುವ ಸಿದ್ದರಾಮಯ್ಯನವರು ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ಕೆ ಕಲ್ಲು ಹಾಕಿದ್ದಾರೆ.

   ಈ ಸಂಬಂಧವಾಗಿ ಭಾರತೀಯ ಜನತಾ ಪಾರ್ಟಿಯು ರಾಜ್ಯಾದ್ಯಂತ ಇದೇ ಶುಕ್ರವಾರ, ಡಿಸೆಂಬರ್ 13 ರಂದು ಪ್ರತಿಭಟಿಸುತ್ತಿದ್ದು ಕೊಪ್ಪಳದಲ್ಲೂ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ತನ್ನ ಪ್ರತಿಭಟನೆಯನ್ನು ವಿವಿಧ ಸಮುದಾಯಗಳೊಡಗೂಡಿ ಸರಕಾರದ ಗಮನ ಸೆಳೆಯಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *