
ಕೊಪ್ಪಳ: ಕೊಪ್ಪಳ ಜಿಲ್ಲೆಗೆ ಆಗಮಿಸಿದ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ. ಪ್ರಭಾಕರ್ ಅವರನ್ನು ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್ ಕಟ್ಟಿಮನಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಉಪಾಧ್ಯಕ್ಷ ಮಾರುತಿ ದೊಡ್ಡಮನಿ, ರಾಜ್ಯ ಪರಿಷತ್ ಸದಸ್ಯ ದುರ್ಗಪ್ಪ ಕಂದಾರಿ, ರಾಜ್ಯ ಪರಿಷತ್ ಸದಸ್ಯ ಲಾಲ್ ಸಾಬ್ ಮನಿಯರ್, ಶಾಖಾ ಅಧ್ಯಕ್ಷ ಮೈಲಪ್ಪ ಕಾರಟಗಿ ಉಪಸ್ಥಿತರಿದ್ದರು.