June 5, 2025
IMG-20241213-WA0037

 ಕೊಪ್ಪಳ : ಭಾರತೀಯ ಜನತಾ ಪಾರ್ಟಿಯಿಂದ ಹಿಂದುಳಿದ ವರ್ಗಗಳ   ನಿಗಮಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಜಿಲ್ಲಾ ಓಬಿಸಿ ಅಧ್ಯಕ್ಷ.ಕೆ.ಎಸ್.ಹನುಮಂತ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು .
         ಕೊಪ್ಪಳ,ಬಳ್ಳಾರಿ ಜಿಲ್ಲಾ ಬಿಜೆಪಿ ಪ್ರಭಾರಿ ಚಂದ್ರಶೇಖರ್ ಪಾಟೀಲ್ ಹಲಿಗೇರಿ ಮಾತನಾಡಿ ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನ ಬಿಡುಗಡೆಯನ್ನು ಬಹುತೇಕ ಸ್ಥಗಿತಗೊಳಿಸಿದ್ದು. ನೆಪ ಮಾತ್ರಕ್ಕೆ ಎನ್ನುವಂತೆ ಬಜೆಟ್‌ನಲ್ಲಿ ಘೋಷಿಸುವ ಮೊತ್ತಕ್ಕೂ ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಇದರಿಂದ ಹಿಂದುಳಿದ ಹಾಗೂ ಅತೀ ಹಿಂದುಳಿದ ಹಾಗೂ ಅಲೆಮಾರಿ ಸಮುದಾಯಗಳು ಹಾಗೂ ಇತರ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳು ಈ ಹಿಂದಿನ ಸರ್ಕಾರದಲ್ಲಿ ಪಡೆಯುತ್ತಿದ್ದ ಸ್ಥ-ಉದ್ಯೋಗ ಯೋಜನೆ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುತ್ತಿದ್ದ ಉಚಿತ ಬೋರ್‌ವೆಲ್ ಯೋಜನ ಬಹುತೇಕ ಸ್ಥಗಿತಗೊಂಡಿದ್ದು ಎಂದರು.
       

      ಕೊಪ್ಪಳ ಜಿಲ್ಲಾ ಬಿಜೆಪಿ ಒಬಿಸಿ ಅಧ್ಯಕ್ಷ ಕೆ.ಎಸ್ .ಹನುಮಂತು ಮಾತನಾಡಿ ಗ್ಯಾರೆಂಟಿ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ಕೆ ವಿನಿಯೋಗವಾಗಬೇಕಿದ್ದ ಹಣವೆಲ್ಲವೂ ವರ್ಗಾವಣೆಯಾಗುತ್ತಿದೆ,ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಅಹಿಂದ ಮಂತ್ರ ಪಠಿಸುವ ಹಾಗೂ ಹಿಂದುಳಿದ ಸಮುದಾಯಗಳನ್ನು ಬಳಸಿಕೊಳ್ಳುವ ಸಿದ್ದರಾಮಯ್ಯನವರು ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳ ಅಭಿವೃದ್ಧಿ ಕಾರ್ಯಗಳು ಮಾಡುತ್ತಿಲ್ಲ ಎಂದರು.
           ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪಕೀರಪ್ಪ ಆರ್ಯರ್ ,ದುರ್ಗಪ್ಪ ವಡಗೇರಿ,ಉಮೇಶ್ ಕುರುಡೇಕರ್ ,ಗಣೇಶ ಹೆುಾರತಟ್ನಾಳ್ ,ಮಹೇಶ್ ಹಾದಿಮನಿ, ಸೋಮಣ್ಣ ಹಳ್ಳಿ,ರಮೇಶ್ ಕವಲೂರು,ಮಹೇಶ್ ಅಂಗಡಿ,ವಾಣಿಶ್ರೀ ಮಠದ್,ಕೀರ್ತಿ ಪಾಟೀಲ್ ,ಸವಿತಾ ಹಿರೇಮಠ,ರಾಧಾ ಕನಕಮೂರ್ತಿ,ಹಂಪಯ್ಯಸ್ವಾಮಿ ಹಿರೇಮಠ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *