
ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು, ರಾಜ್ಯದ ಕಾಂಗ್ರೆಸ್ ಪಕ್ಷದ ಸರ್ಕಾರ ಜನಪರ ಆಡಳಿತದ ಸಾಧನೆ ಜನರಿಗೆ ತಿಳಿಸಲು ಹಾಗೂ ಗ್ರಾಮೀಣ ಭಾಗದಲ್ಲಿ ವಾಸಿಸುವ ಬಡ ನಿರಾಶ್ರಿತ ಫಲಾನುಭವಿಗಳಿಗೆ ಸೂರಿನ ಭದ್ರತೆಯ ಹಕ್ಕು ಪತ್ರ ನೀಡಲಾಗುತ್ತಿದೆ ಎಂದು ಕೊಪ್ಪಳ ನಗರಾನಭಿವೃದ್ಧಿ ಪ್ರಾಧಿಕಾರ ಸದಸ್ಯ ಅಜ್ಜಪ್ಪ ಸ್ವಾಮಿ ಚೆನ್ನವಡೆಯರ ಮಠ ಅವರು ತಿಳಿಸಿದರು.
ಅವರು ಹೊಸಪೇಟೆಯಲ್ಲಿ ಜರಗುವ ಸಾಧನಾ ಸಮಾವೇಶಕ್ಕೆ ಜನರ ಜೊತೆ ತೇರಳುವ ಮುನ್ನ ಮಾತನಾಡಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇಂದು ಮೇ.20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗು ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ರಾಜ್ಯಸರ್ಕಾರದ ಸಾಧನೆ ಸಮಾವೇಶದಲ್ಲಿ ಸುಮಾರು ಮೂರು ಲಕ್ಷ ಜನ ಸೇರುವ ನಿರೀಕ್ಷೆ ಇದೆ,ಎರಡು ವರ್ಷದ ಸರ್ಕಾರದ ಸಾಧನೆ ಬಗ್ಗೆ ಜನರಿಗೆ ತಿಳಿಸಲಾಗುವುದು, ಮುಂದಿನ ಮೂರು ವರ್ಷಗಳ ಅಭಿವೃದ್ಧಿಯ ಜನಪರ ಕಾರ್ಯಕ್ರಮಗಳ ರೂಪುರೇಷಗಳನ್ನು ತಿಳಿಸಲಾಗುವುದು.
ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಮುಖ್ಯಮಂತ್ರಿಗಳು ಸಚಿವ ಸಂಪುಟದ ಎಲ್ಲಾ ಸದಸ್ಯರುಗಳು ಭಾಗವಹಿಸಿಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.