
ಕೊಪ್ಪಳ : ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಜಿಲ್ಲೆಯಲ್ಲಿ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಗುತ್ತಿಗೆದಾರ ಸಂಘ (ಪ.ಜಾ/ಪ.ಪಂಗಡ) ಜಿಲ್ಲಾ ಶಾಖೆ ಕೊಪ್ಪಳ ವತಿಯಿಂದ ಪಿಡಬ್ಲ್ಯೂಡಿ ಕಚೇರಿಯ ಮುಂದೆ ಅರೆಬೆತ್ತಲೆ ಧರಣಿ ಸತ್ಯಾಗ್ರಹವು ಮಂಗಳವಾರವು ಸಹ 4ನೇ ದಿನಕ್ಕೆ ಮುಂದುವರಿಯಿತು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಹಿಂದುಳಿದ ವರ್ಗ, ಜಾತಿಯ ಗುತ್ತಿಗೆದಾರರಿಗೆ ಜಾತಿವಾರು ಅನುಗುಣವಾಗಿ ಮೀಸಲಾತಿಯನ್ನು ಸರಕಾರ ನೀಡಿರುತ್ತದೆ,ಆದರೆ ಕಾರ್ಯನಿರ್ವಾಹಕ ಇಂಜೀನಿಯರ್ ಲೋಕೋಪಯೋಗಿ ಇಲಾಖೆ,ಮುಖ್ಯ ಇಂಜಿನಿಯರ್ ಪಿಡಬ್ಲ್ಯೂಡಿ ಕಲಬುರ್ಗಿ ,ಇವರು ಸೇರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಹಿಂದುಳಿದ ವರ್ಗ, ಗುತ್ತಿಗೆದಾರರಿಗೆ ಟೆಂಡರ್ ನೀಡುವಲ್ಲಿ ಅನ್ಯಾಯ ಮಾಡುತ್ತಾ ಬಂದಿದ್ದು, ಕೆ ಟಿಪಿಪಿ ಕಾಯಿದೆ ಉಲ್ಲಂಘನೆ ಮಾಡಿ ಪ.ಜಾ/ ಪ.ಪಂ ಗುತ್ತಿಗೆದಾರರಿಗೆ ಶೇ.24.10% ಇದ್ದು ಇದರ ಪ್ರಕಾರ ನಿಯಮಾನುಸಾರ ಟೆಂಡರ್ ಕರೆಯ ಬೇಕಾಗಿರುತ್ತದೆ,ಆದರೆ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕಾಗಿ ಗುತ್ತಿಗೆದಾರಿಗೆ ಅನ್ಯಾಯ ಮಾಡುತ್ತಾ ಬಂದಿರುತ್ತಾರೆ,ಆದ್ದರಿಂದ ಈ ಪ್ಯಾಕೇಜ್ ಟೆಂಡರ್ ಕರೆದಿರುವಂತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಈ ಪ್ಯಾಕೇಜ್ ಟೆಂಡರನ್ನು ರದ್ದು ಪಡಿಸುವವರೆಗೂ ಈ ಧರಣಿ ಸತ್ಯಾಗ್ರಹವನ್ನು ಆಹೋರಾತ್ರಿ ಸಂಘಟನೆ ಮುಂದುವರಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಾಲ್ಕು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು ಸಹ ಲೋಕೋಪಯೋಗಿ ಇಲಾಖೆಯ ಇಇ,ಎಇಇ ಸೇರಿದಂತೆ ಯಾರು ಸ್ಪಂದಿಸ್ತ ಇಲ್ಲ ಎಂದು ಧರಣಿ ನಿರತರು ಪತ್ರಿಕೆಗೆ ತಿಳಿಸಿದರು.
ಧರಣಿ ಸತ್ಯಾಗ್ರಹದಲ್ಲಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಗುತ್ತಿಗೆದಾರ್ ಸಂಘದ ವಿಭಾಗೀಯ ಅಧ್ಯಕ್ಷ ಸಿದ್ದು ಕೆ.ಮಣ್ಣಿನವರ, ಜಿಲ್ಲಾ ಅಧ್ಯಕ್ಷ ಯಂಕಪ್ಪ ಹೊಸಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ಯಾಮಣ್ಣ ಭಜಂತ್ರಿ, ಗೌರವ ಅಧ್ಯಕ್ಷ ನಾಗರಾಜ್ ನಂದ್ಯಾಪುರ್ , ಹನುಮೇಶ್ ಕಡೆಮನಿ, ಪರಶುರಾಮ್ ಕೆರೆಹಳ್ಳಿ ಪ್ರಕಾಶ್ ಹೊಳೆಯಪ್ಪನವರ್ ,ಜುಂಜಪ್ಪ ಮೆಳ್ಳಿಕೇರಿ, , ಗಣೇಶ್ ಹೆುಾರತಟ್ನಾಳ್, ಮಂಜುನಾಥ್ ಮುಸಲಾಪುರ,ಯಲ್ಲಪ್ಪ ಹಳೇಮನಿ, ಗಾಳೆಪ್ಪ ಕುಕನಪಳ್ಳಿ, ನಿಂಗಜ್ಜ ಚೌಧರಿ ಶಹಪುರ,ಗವಿ ಹೂಗಾರ, ಮರಿಸ್ವಾಮಿ ಕೆ. ಮಣ್ಣೀನವರ್, ರಾಮನಗೌಡ ಪಾಟೀಲ್, ಬಸವರಾಜ್ ಗಬ್ಬೂರು, ಪ್ರಶಾಂತ್ ನಾಯಕ್, ವೆಂಕಟೇಶ್ ನೆಲುಗಿಪುರ, ಬಸವರಾಜ್ ಡಂಬರಹಳ್ಳಿ, ನಿಂಗಪ್ಪ ಗದ್ದಿ, ಮಲ್ಲಪ್ಪ ಮುದ್ಲಾಪುರ,ನಿಂಗಜ್ಜ ಸೇರಿದಂತೆ ಬಹಳಷ್ಟು ಗುತ್ತಿಗೆದಾರರು ಪಾಲ್ಗೊಂಡಿದ್ದರು.