ಕೊಪ್ಪಳ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿಯು ಕೊಪ್ಪಳ ನಗರದ ಸಮಾಜ ಸೇವಕರು ಸಹಕಾರಿ ರಂಗದ ಹರಿಕಾರರು, ಸರಳ ಸ್ನೇಹಜೀವಿ ಮಾತೃ ಹೃದಯದ ಧೀಮಂತ ವ್ಯಕ್ತಿತ್ವದ ನೀಲಕಂಠಯ್ಯ ಹಿರೇಮಠ ಅವರು ಸಹಕಾರಿ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರೀಯ ಸಹಕಾರ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರವಿವಾರದಂದು ಬೆಂಗಳೂರಿನ ನಯನ ರಂಗಮಂದಿರದಲ್ಲಿ(ರವೀಂದ್ರ ಕಲಾಕ್ಷೇತ್ರ ಆವರಣ) ಜರುಗಿದ 74ನೇ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಬುದ್ಧ ಬಸವ ಅಂಬೇಡ್ಕರ್ ಕುರಿತು ರಾಷ್ಟ್ರೀಯ ವಿಚಾರ ಸಂಕೀರ್ಣದಲ್ಲಿ ಸಹಕಾರಿ ರಂಗದ ಹರಿಕಾರರು ನೀಲಕಂಠಯ್ಯ ಹಿರೇಮಠ ಅವರು ಸಹಕಾರಿ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರೀಯ ಸಹಕಾರ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಉಡುಪಿಯ ದೊಡ್ಡಣ್ಣ ಗುಡ್ಡೆ ಮಹಾಸಂಸ್ಥಾನದ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ವಹಿಸಿದ್ದರು.
ಬೆಳಗಾವಿಯ ಚಿಪ್ಪಲಕಟ್ಟಿ ಹಿರೇಮಠದ ಡಾ. ಕಲ್ಮೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡುವರು.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಪತ್ರಕರ್ತರು ಸಾಹಿತಿ ಡಾ. ಎಂ ಲಕ್ಷ್ಮೀನಾರಾಯಣ ನೆರವೇರಿಸಿದರು.
ವಿಚಾರ ಸಂಕೀರ್ಣದ ಅಧ್ಯಕ್ಷತೆಯನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಡೀನ್ ಕಲಾನಿಕಾಯ ಪ್ರೊಫೆಸರ್ ಎಚ್ ಟಿ ಪೋತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟಿ ಮೀನಾ, ಹಿರಿಯ ಸಾಹಿತಿ ಡಾ. ಅಶೋಕ್ ನರೋಡೆ,ಡಾ.ಚಿಕ್ಕ ಹೆಜ್ಜಾಜಿ, ಏಕೆ ಜಯದೇವ್, ಜಿ.ಎಸ್ ಗೋನಾಳ್, ಸಂಘಟಕರಾದ ರಮೇಶ್ ಸುರ್ವೆ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
